ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಜೊತೆಗೆ ವಿವಿಧ ರಾಜ್ಯಗಳ 65 ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಸದ್ಯದಲ್ಲೇ ಉಪ ಚುನಾವಣೆ ದಿನಾಂಕ ಪ್ರಕಟಿಸುವುದಾಗಿ ಆಯೋಗದ ವಕ್ತಾರರು ತಿಳಿಸಿದ್ದಾರೆ.
ಕರ್ನಾಟಕದ ಶಿರಾ ವಿಧಾನಸಭಾ ಕ್ಷೇತ್ರವೂ ಇದರಲ್ಲಿ ಸೇರಿದೆ. ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ ಅವರ ನಿಧನದಿಂದ ಶಿರಾ ಕ್ಷೇತ್ರ ತೆರವಾಗಿದೆ. ಮಧ್ಯಪ್ರದೇಶದಲ್ಲಿ 22 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಜ್ಯೋತಿ
ರಾದಿತ್ಯ ಸಿಂಧಿಯಾ ಅವರ ಜತೆ ಗುರುತಿಸಿಕೊಂಡಿದ್ದ ಶಾಸಕರ ರಾಜೀನಾಮೆಯಿಂದ ಈ ಕ್ಷೇತ್ರಗಳು ತೆರವಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.