ADVERTISEMENT

ದೆಹಲಿ ಹಿಂಸಾಚಾರ: ಬಂದೂಕಿನಿಂದ ಗುಂಡು ಹಾರಿಸಿದ ಯುವಕ ಶಾರುಖ್‌ ಬಂಧನ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 12:44 IST
Last Updated 25 ಫೆಬ್ರುವರಿ 2020, 12:44 IST
ಈಶಾನ್ಯ ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಬಂದೂಕು ಪ್ರದರ್ಶಿಸುತ್ತಿರುವ ಯುವಕ
ಈಶಾನ್ಯ ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಬಂದೂಕು ಪ್ರದರ್ಶಿಸುತ್ತಿರುವ ಯುವಕ   

ನವದೆಹಲಿ:ಈಶಾನ್ಯ ದೆಹಲಿ ಜಫ್ರಾಬಾದ್‌ನಲ್ಲಿ ಸೋಮವಾರ ನಡೆದ ಹಿಂಸಾಚಾರದ ವೇಳೆ ಕೈಯಲ್ಲಿ ಬಂದೂಕು ಹಿಡಿದು ಪೊಲೀಸ್‌ ಅಧಿಕಾರಿಗೆ ಬೆದರಿಕೆಯೊಡ್ಡಿದ್ದ ಯುವಕನ ಚಿತ್ರ ಮತ್ತು ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಸಿಎಎ ವಿರುದ್ದ ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭ ಬಂದೂಕು ಪ್ರದರ್ಶಿಸಿದ ಯುವಕನನ್ನು ಶಾರುಖ್‌ ಎಂದು ಗುರುತಿಸಲಾಗಿದೆ.

ಸಿಎಎ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ಜನರ ಗುಂಪಿನಲ್ಲಿ ಕಾಣಿಸಿಕೊಂಡಿದ್ದ ಯುವಕ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಬಂದೂಕು ತೋರಿಸಿ ಹಿಂದೆ ಸರಿಯುವಂತೆ ಬೆದರಿಕೆ ಹಾಕಿದ್ದ. ಆ ವೇಳೆ ಪೊಲೀಸ್‌ ಅಧಿಕಾರಿ ಯುವಕನ ಬೆದರಿಕೆಗೆ ಜಗ್ಗದೇ, ಎರಡು ಕೈ ಎತ್ತಿ ಮುಂದೆ ಬಂದಾಗ ಯುವಕ ಗಾಳಿಯಲ್ಲಿ ಗುಂಡು ಹಾರಿಸಿದ್ದನ್ನು ಪ್ರತ್ಯಕ್ಷದರ್ಶಿಗಳು ತಮ್ಮ ಮೊಬೈಲ್‌ನಲ್ಲಿ ಚಿತ್ರಿಕರಿಸಿಕೊಂಡಿದ್ದರು.

ADVERTISEMENT

ಆ ಯುವಕನನ್ನು ಬಂಧಿಸಿರುವ ದೆಹಲಿ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ಸಿಎಎ ಪರ–ವಿರುದ್ದದ ಗುಂಪುಗಳು ನಡುವೆ ಭಾನುವಾರ ‍ಸಂಘರ್ಷ ಉಂಟಾಗಿತ್ತು. ಸೋಮುವಾರವೂ ಮುಂದುವರೆದ ಹಿಂಸಾಚಾರದಲ್ಲಿ ಏಳು ಜನರು ಸಾವಿಗೀಡಾಗಿ, ಹಲವರು ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.