ನವದೆಹಲಿ: ಪೌರತ್ವತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರಿದಿರುವ ಕಾರಣ ಗೃಹ ಸಚಿವ ಅಮಿತ್ ಶಾ, ಶಿಲ್ಲಾಂಗ್, ಮೇಘಾಲಯ ಭೇಟಿ ರದ್ದು ಮಾಡಿದ್ದಾರೆ.
ಭಾನುವಾರ ಶಿಲ್ಲಾಂಗ್ನಲ್ಲಿರುವ ಈಶಾನ್ಯ ಪೊಲೀಸ್ ಅಕಾಡೆಮಿಗೆ ಮತ್ತು ಸೋಮವಾರ ತವಾಂಗ್ಗೆ ಅಮಿತ್ ಶಾ ಭೇಟಿ ನಿಗದಿಯಾಗಿತ್ತು. ಆದರೆ ಇಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದಿರುವುದರಿಂದ ಭೇಟಿಯನ್ನು ರದ್ದು ಮಾಡಲಾಗಿದೆ.
ಇದನ್ನೂ ಓದಿ:ಅಸ್ಸಾಂನಲ್ಲಿ ಪ್ರತಿಭಟನೆ: ಜಪಾನ್ ಪ್ರಧಾನಿಯ ಭಾರತ ಪ್ರವಾಸ ರದ್ದಾಗುವ ಸಾಧ್ಯತೆ
ಮೂಲಗಳ ಪ್ರಕಾರ ಶಾ ಅವರು ಶನಿವಾರ ಮತ್ತು ಸೋಮವಾರ ಜಾರ್ಖಂಡ್ನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.