ADVERTISEMENT

ದೇಶ ತೊರೆಯಲು ಪೋಲೆಂಡ್‌ ವಿದ್ಯಾರ್ಥಿಗೆ ನೀಡಿದ್ದ ನೋಟಿಸ್‌ಗೆ ತಡೆ

ಸಿಎಎ ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗಿ

ಪಿಟಿಐ
Published 5 ಮಾರ್ಚ್ 2020, 18:20 IST
Last Updated 5 ಮಾರ್ಚ್ 2020, 18:20 IST
   

ಕೋಲ್ಕತ್ತ:ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆದ ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಪೋಲೆಂಡ್‌ ಮೂಲದ ವಿದ್ಯಾರ್ಥಿಯೊಬ್ಬರಿಗೆ ಭಾರತ ಬಿಟ್ಟು ಹೋಗುವಂತೆ ಕೇಂದ್ರ ಸರ್ಕಾರ ನೀಡಿದ್ದ ನೋಟಿಸ್‌ಗೆ ಕೋಲ್ಕತ್ತ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದನ್ಯಾಯಮೂರ್ತಿ ಸವ್ಯಸಾಚಿ ಭಟ್ಟಾಚಾರ್ಯ ಅವರು, ನೋಟಿಸ್‌ಗೆ ತಡೆ ನೀಡಿದ್ದಾರೆ.

ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ ಕಮಿಲ್‌ ಸಿಜೆಂಸ್ಕಿ ಅವರಿಗೆ ಫೆ. 14ಕ್ಕೆ ನೋಟಿಸ್‌ ಜಾರಿ ಮಾಡಿದ್ದು, ಮಾರ್ಚ್‌ 9ರೊಳಗೆ ದೇಶ ತೊರೆಯಲು ಸೂಚಿಸಲಾಗಿತ್ತು.

ADVERTISEMENT

ವಿದ್ಯಾರ್ಥಿ ವೀಸಾ ಹೊಂದಿರುವ ಕಾರಣ ಈ ವಿದ್ಯಾರ್ಥಿ ಭಾರತೀಯ ಸಂಸತ್ತು ಅಂಗೀಕರಿಸಿದ ಕಾನೂನನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.