ADVERTISEMENT

ಕನಿಷ್ಠ ಬೆಂಬಲ ಬೆಲೆ ವಿರೋಧಿಸುವ ಕೆನಡಾಕ್ಕೆ ಭಾರತದ ರೈತರ ಬಗ್ಗೆ ಕಾಳಜಿ: ಬಿಜೆಪಿ

ಬಿಜೆಪಿಯ ವಿದೇಶಾಂಗ ವ್ಯವಹಾರಗಳ ಉಸ್ತುವಾರಿ ಟೀಕೆ

ಪಿಟಿಐ
Published 5 ಡಿಸೆಂಬರ್ 2020, 6:26 IST
Last Updated 5 ಡಿಸೆಂಬರ್ 2020, 6:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ವಿಶ್ವ ವ್ಯಾಪಾರ ಸಂಸ್ಥೆಯಲ್ಲಿ ಭಾರತದ ಕೃಷಿ ನೀತಿಗಳು ಮತ್ತು ಕನಿಷ್ಠ ಬೆಂಬಲ ಬೆಲೆ ವಿಚಾರವನ್ನು ತೀವ್ರವಾಗಿ ಟೀಕಿಸುವ ಕೆನಡಾ, ಈಗ ಭಾರತದ ರೈತರ ಪ್ರತಿಭಟನೆಯನ್ನು ಬೆಂಬಲಿಸುವ ಮೂಲಕ ನಮ್ಮ ದೇಶದ ರೈತರ ಬಗೆಗಿರುವ ‘ತೋರಿಕೆಯ ಕಾಳಜಿ‘ಯನ್ನು ಪ್ರದರ್ಶಿಸುತ್ತಿದೆ’ ಎಂದು ಬಿಜೆಪಿ ಆರೋಪಿಸಿದೆ.

‘ರೈತರ ಹಿತದೃಷ್ಟಿಯಿಂದ ಭಾರತ ಜಾರಿಗೊಳಿಸಿರುವ ಆಮದು ಮೇಲಿನ ನಿರ್ಬಂಧವನ್ನು ಕೆನಡಾ ವಿರೋಧಿಸುತ್ತದೆ. ಆದರೆ, ವಿಶ್ವ ವ್ಯಾಪಾರ ಸಂಸ್ಥೆಯಲ್ಲಿ ಭಾರತದ ಕೃಷಿ ನೀತಿಗಳನ್ನೇ ಪ್ರಶ್ನಿಸುತ್ತದೆ. ಭಾರತದ ರೈತರ ಬಗ್ಗೆ ಕೆನಡಾಕ್ಕೆ ಎಷ್ಟರ ಮಟ್ಟಿಗೆ ಕಾಳಜಿ ಇದೆ ಎಂಬುದಕ್ಕೆ ಇದು ಸಾಕ್ಷಿ’ ಎಂದು ಬಿಜೆಪಿಯ ವಿದೇಶಾಂಗ ವ್ಯವಹಾರಗಳ ಉಸ್ತುವಾರಿ ವಿಜಯ್ ಚೌಥೈವಾಲೆ ಟ್ವೀಟ್‌ ಮಾಡಿದ್ದಾರೆ.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಇತ್ತೀಚೆಗೆ ಭಾರತದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುತ್ತಾ, ‘ಹಕ್ಕುಗಳ ರಕ್ಷಣೆಗಾಗಿ ನಡೆಯುವ ಶಾಂತಿಯುತ ಪ್ರತಿಭಟನೆಗಳನ್ನು ನಾವು ಯಾವಾಗಲೂ ಬೆಂಬಲಿಸುತ್ತೇವೆ‘ ಎಂದು ಹೇಳಿದ್ದರು.

ಈ ಹೇಳಿಕೆ ಖಂಡಿಸಿ, ಭಾರತ ಶುಕ್ರವಾರ ಪ್ರತಿಭಟನೆ ದಾಖಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.