ನವದೆಹಲಿ: ಪಂಜಾಬ್ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿಗೆ ಮಂಗಳವಾರ ಪತ್ರವನ್ನು ಕಳುಹಿಸಿದ್ದಾರೆ. ಆ ನಂತರ ಅಧಿಕೃತವಾಗಿ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ.
'ನನ್ನನ್ನು ಮತ್ತು ನನ್ನ ಆಡಳಿತವನ್ನು ನಿಂದಿಸಿದ್ದಾರೆ ಎಂಬುದು ಸಿಧು ಅವರ ಏಕೈಕ ಖ್ಯಾತಿಯಾಗಿದೆ. ಸಿಧು ಅವರನ್ನು ರಾಹುಲ್ ಮತ್ತು ಪ್ರಿಯಾಂಕಾ ಬೆಂಬಲಿಸಿದರು. ಆದರೆ, ನೀವು ಹರೀಶ್ ರಾವತ್ ಅವರ ಮಾತುಗಳಿಗೆ ತಲೆದೂಗಿದ್ದೀರಿ. ಈ ವ್ಯಕ್ತಿಯ(ಸಿಧು) ದುಷ್ಕೃತ್ಯಗಳನ್ನು ನೋಡದೇ ಕಣ್ಣು ಮುಚ್ಚಿ ಕುಳಿತಿದ್ದೀರಿ' ಎಂದು ಸೋನಿಯಾಗೆ ಬರೆದ ಪತ್ರದಲ್ಲಿ ಕ್ಯಾಪ್ಟನ್ ತಿಳಿಸಿದ್ದಾರೆ.
ಕಾಂಗ್ರೆಸ್ ತೊರೆದಿದ್ದ ಪಂಜಾಬ್ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಹೊಸ ಪಕ್ಷದ ಹೆಸರನ್ನು ಮಂಗಳವಾರ ಘೋಷಿಸಿದ್ದಾರೆ.
ಪಂಜಾಬ್ ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಧು ಅವರೊಂದಿಗಿನ ತೀವ್ರ ಸಂಘರ್ಷದ ನಡುವೆ ಅಮರಿಂದರ್ ಸಿಂಗ್ ಅವರು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.