ADVERTISEMENT

ಭ್ರಷ್ಟಾಚಾರ ಆರೋಪ ಪ್ರಕರಣ: ರಿಯಲ್ ಎಸ್ಟೇಟ್‌ ಉದ್ಯಮಿ ಬಂಧನ

ಪಿಟಿಐ
Published 26 ಮೇ 2022, 20:20 IST
Last Updated 26 ಮೇ 2022, 20:20 IST
   

ನವದೆಹಲಿ: ಪುಣೆ ಮೂಲದ ರಿಯಲ್‌ ಎಸ್ಟೇಟ್ ಸಮೂಹ ಎಬಿಐಎಲ್‌ನಅಧ್ಯಕ್ಷ ಅವಿನಾಶ್‌ ಭೋಂಸ್ಲೆ ಅವರನ್ನು ಸಿಬಿಐ ಗುರುವಾರ ಬಂಧಿಸಿದೆ.

ಯೆಸ್‌ ಬ್ಯಾಂಕ್‌ ಸ್ಥಾಪಕ ರಾಣಾ ಕಪೂರ್‌ ಮತ್ತು ಡಿಎಚ್ಎಫ್‌ಎಲ್‌ನ ಕಪಿಲ್‌ ವಾಧವನ್‌ ಅವರು ಭಾಗಿಯಾಗಿರುವ ಭ್ರಷ್ಟಾಚಾರ ಆರೋಪ ಪ್ರಕರಣದ ಸಂಬಂಧ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ಹಲವು ರಿಯಲ್ ಎಸ್ಟೇಟ್‌ ಕಂಪನಿಗಳ ಮೂಲಕ ಕಾನೂನು ಬಾಹಿರ ಹಣ ವರ್ಗಾವಣೆಯಾಗಿದೆ ಎಂದು ಸಿಬಿಐ ಶಂಕಿಸಿದೆ. ಏಪ್ರಿಲ್‌ 30ರಂದು ಸಿಬಿಐ ಅಧಿಕಾರಿಗಳು ಹೆಸರಾಂತ ಬಿಲ್ಡರ್‌ಗಳಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.