ADVERTISEMENT

ಜಾನುವಾರು ಕಳ್ಳಸಾಗಣೆ ಪ್ರಕರಣ: ಟಿಎಂಸಿ ನಾಯಕ ಅನುಬ್ರತಾ ಮೊಂಡಲ್ ಬಂಧಿಸಿದ ಸಿಬಿಐ

ಪಿಟಿಐ
Published 11 ಆಗಸ್ಟ್ 2022, 7:25 IST
Last Updated 11 ಆಗಸ್ಟ್ 2022, 7:25 IST
ಅನುಬ್ರತಾ ಮೊಂಡಲ್ –ಐಎಎನ್‌ಎಸ್ ಚಿತ್ರ
ಅನುಬ್ರತಾ ಮೊಂಡಲ್ –ಐಎಎನ್‌ಎಸ್ ಚಿತ್ರ   

ಕೋಲ್ಕತ್ತ: ಜಾನುವಾರು ಕಳ್ಳಸಾಗಣೆ ಪ್ರಕರಣದ ತನಿಖೆಗೆ ಸಹಕರಿಸದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ನಾಯಕ ಅನುಬ್ರತಾ ಮೊಂಡಲ್ ಅವರನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಅನುಬ್ರತಾ ಮೊಂಡಲ್‌ಗೆ ಸೂಚಿಸಲಾಗಿತ್ತು. ಆದರೆ, ಅವರು ಅನಾರೋಗ್ಯ ಕಾರಣ ನೀಡಿ ಎರಡು ಬಾರಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು.

ಅನುಬ್ರತಾ ಮೊಂಡಲ್‌ ಅವರು ಬಿರ್ಭುಮ್‌ನ ಟಿಎಂಸಿಯ ಜಿಲ್ಲಾಧ್ಯಕ್ಷರಾಗಿದ್ದಾರೆ. ಗುರುವಾರ ಬೆಳಿಗ್ಗೆ ಮೊಂಡಲ್‌ ಮನೆಗೆ ಆಗಮಿಸಿದ ಸಿಬಿಐ ಅಧಿಕಾರಿಗಳ ತಂಡ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿತು. ಬಳಿಕ ಅವರನ್ನು ಬಂಧಿಸಿದೆ.

ADVERTISEMENT

ಪ್ರಕರಣದ ತನಿಖೆಗೆ ಸಹಕರಿಸದಿದ್ದಕ್ಕಾಗಿ ಅನುಬ್ರತಾ ಮೊಂಡಲ್‌ ಅವರನ್ನು ಬಂಧಿಸಿದ್ದೇವೆ ಎಂದು ಸಿಬಿಐ ಅಧಿಕಾರಿಯೊಬ್ಬರು ‘ಪಿಟಿಐ’ಗೆ ತಿಳಿಸಿದ್ದಾರೆ.

ಸದ್ಯ ಮೊಂಡಲ್ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.