ನವದೆಹಲಿ: ವಿವಿಧ ಬ್ಯಾಂಕುಗಳಿಗೆ ವಂಚಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೆಂಗಳೂರು, ಬಳ್ಳಾರಿ ಸೇರಿದಂತೆ ದೇಶದ 100 ಸ್ಥಳಗಳಲ್ಲಿಸಿಬಿಐ ಗುರುವಾರ ಶೋಧಕಾರ್ಯ ಕೈಗೊಂಡಿತ್ತು.
₹ 3,700 ಕೋಟಿಗೂ ಅಧಿಕ ಮೊತ್ತದ ಅವ್ಯವಹಾರಕ್ಕೆ ಸಂಬಂಧಿಸಿದಂತೆ 11 ರಾಜ್ಯಗಳಲ್ಲಿ ಒಟ್ಟು 30 ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.
ವಂಚನೆ ಕುರಿತು ಇಂಡಿಯನ್ ಓವರ್ಸೀಸ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಎಸ್ಬಿಐ, ಐಡಿಬಿಐ, ಕೆನರಾ ಬ್ಯಾಂಕ್, ಇಂಡಿಯನ್ ಬ್ಯಾಂಕ್ ಹಾಗೂ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೀಡಿರುವ ದೂರುಗಳ ಆಧಾರದ ಮೇಲೆ ಶೋಧ ಕಾರ್ಯ ಕೈಗೊಳ್ಳಲಾಗಿತ್ತು ಎಂದು ಸಿಬಿಐ ವಕ್ತಾರ ಆರ್.ಸಿ.ಜೋಶಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.