ನವದೆಹಲಿ: ಪಂಜಾಬ್ ಮತ್ತು ಹರಿಯಾಣದಲ್ಲಿ ಭಾರತೀಯ ಆಹಾರ ನಿಗಮದ (ಎಫ್ಸಿಐ) 20 ಗೋದಾಮುಗಳ ಮೇಲೆ ಸಿಬಿಐ ಶುಕ್ರವಾರ ದಾಳಿ ನಡೆಸಿದೆ.
ಇಲ್ಲಿನ ಎಫ್ಸಿಐ ಗೋದಾಮುಗಳ ಅವ್ಯವಹಾರ ಮತ್ತು ಅಕ್ರಮಗಳಿಗೆ ಸಂಬಂಧಿಸಿಂತೆ ಹಲವು ದೂರುಗಳ ಬಂದ ಕಾರಣ ಸಿಬಿಐ ಈ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕ ವ್ಯವಹಾರಗಳು ನಡೆಯುವ ಸ್ಥಳಗಳಲ್ಲಿ ಭ್ರಷ್ಟಾಚರ ತಡೆಯುವ ಉದ್ದೇಶದ ಭಾಗವಾಗಿ ಈ ಪರಿಶೀಲನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಎರಡೂ ರಾಜ್ಯಗಳ ಗೋದಾಮುಗಳ ಮೇಲೆ ಎಫ್ಸಿಐನ ಜಾಗೃತಿ ದಳದ ತಂಡಗಳೊಂದಿಗೆ ಜಂಟಿಯಾಗಿ ಈ ಕ್ರಮ ತೆಗೆದುಕೊಂಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.