ADVERTISEMENT

ಸಿಬಿಐನಿಂದ ಅಖಿಲೇಶ್‌ ಯಾದವ್‌ ವಿಚಾರಣೆ ಸಾಧ್ಯತೆ

ಮರಳು ಅಕ್ರಮ ಗಣಿಗಾರಿಕೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 5 ಜನವರಿ 2019, 19:30 IST
Last Updated 5 ಜನವರಿ 2019, 19:30 IST
ಅಖಿಲೇಶ್‌ ಯಾದವ್‌
ಅಖಿಲೇಶ್‌ ಯಾದವ್‌   

ನವದೆಹಲಿ (ಪಿಟಿಐ): ಮರಳು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2012ರಿಂದ 2013ರ ಜೂನ್‌ವರೆಗೆ ಉತ್ತರಪ್ರದೇಶ ಗಣಿಗಾರಿಕೆ ಇಲಾಖೆಯ ಹೆಚ್ಚುವರಿ ಹೊಣೆಯನ್ನು ಆಗಿನ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್‌ ಅವರೇ ವಹಿಸಿಕೊಂಡಿದ್ದರು.

ಇದಕ್ಕೂ ಮುನ್ನ ಇದೇ ಇಲಾಖೆಯ ಸಚಿವರಾಗಿದ್ದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.