ADVERTISEMENT

ಅನಿಲ್‌ ದೇಶಮುಖ್‌ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಬಿಐ

ಪಿಟಿಐ
Published 17 ಡಿಸೆಂಬರ್ 2022, 12:22 IST
Last Updated 17 ಡಿಸೆಂಬರ್ 2022, 12:22 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ಅವರಿಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಅನಿಲ್‌ ಅವರಿಗೆ ಜಾಮೀನು ನೀಡುವಾಗ ‌ತನಿಖೆಗೆ ಆಗುವ ಗಂಭೀರ ಅಪಾಯಗಳನ್ನು ಹೈಕೋರ್ಟ್‌ ಲೆಕ್ಕಿಸಿಲ್ಲ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ಹೇಳಿದೆ.

ಡಿ.12 ರಂದು ಹೈಕೋರ್ಟ್‌ ಎನ್‌ಸಿಪಿ ನಾಯಕ ಅನಿಲ್‌ಗೆ ಜಾಮೀನು ನೀಡಿದೆ. ಆದರೆ 10 ದಿನಗಳ ಬಳಿಕ ಇದು ಜಾರಿಗೆ ಬರಲಿದೆ ಎಂದು ತಿಳಿಸಿತ್ತು. ಅದರ ನಡುವೆಯೇ ಈ ಅರ್ಜಿ ಸಲ್ಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.