ಕೋಲ್ಕತ್ತ: ಭಾರತ–ಬಾಂಗ್ಲದೇಶ ಗಡಿಯಲ್ಲಿ ದನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತದ ವ್ಯಕ್ತಿಯೊಬ್ಬರಿಗೆ ಸೇರಿದ ಎರಡು ಸ್ಥಳಗಳಲ್ಲಿ ಗುರುವಾರ ಸಿಬಿಐ ಶೋಧ ನಡೆಸಿದೆ.
ತೃಣಮೂಲ ಕಾಂಗ್ರೆಸ್ಗೆ ಹತ್ತಿರವಾಗಿರುವ ಬಿನಯ್ ಮಿಶ್ರಾ ಎಂಬುವವರಿಗೆ ಸಿಬಿಐ ಲುಕ್ಔಟ್ ನೋಟಿಸ್ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣ ಸಂಬಂಧ ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಕಮಾಂಡೆಂಟ್ ಒಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಖ್ಯ ಆರೋಪಿ ಎನಾಮುಲ್ ಹಕಿ ಎಂಬಾತನನ್ನು ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.