ADVERTISEMENT

ಸಿಬಿಐ ಅಧಿಕಾರಿ ಆತ್ಮಹತ್ಯೆ: ಸಿಸೋಡಿಯಾ ಹೇಳಿಕೆ ಚೇಷ್ಟೆಯಿಂದ ಕೂಡಿದೆ ಎಂದ ಸಿಬಿಐ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಸೆಪ್ಟೆಂಬರ್ 2022, 13:46 IST
Last Updated 5 ಸೆಪ್ಟೆಂಬರ್ 2022, 13:46 IST
ಮನೀಶ್‌ ಸಿಸೋಡಿಯಾ
ಮನೀಶ್‌ ಸಿಸೋಡಿಯಾ    

ನವದೆಹಲಿ: ಕೇಂದ್ರ ಸರ್ಕಾರದ ಅತಿಯಾಗಿ ಒತ್ತಡ ಹೇರಿದ್ದರಿಂದಲೇ ಸಿಬಿಐ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಆರೋಪಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಸಿಬಿಐ, ಸಿಸೋಡಿಯಾ ಆರೋಪ ಚೇಷ್ಟೆಯಿಂದ ಕೂಡಿದ್ದು ತಪ್ಪುದಾರಿಗೆ ಎಳೆಯುವ ಪ್ರಯತ್ನವಾಗಿದೆ ಎಂದು ತಿಳಿಸಿದೆ.

‘ಮನೀಶ್ ಸಿಸೋಡಿಯಾ ಅವರ ಹೇಳಿಕೆಯು ಚೇಷ್ಟೆಯಿಂದ ಕೂಡಿದ್ದು ತಪ್ಪುದಾರಿಗೆಳೆಯುವ ಯತ್ನವಾಗಿದೆ. ಸಜ್ಜನ ಅಧಿಕಾರಿ ದಿವಂಗತ ಜಿತೇಂದ್ರ ಕುಮಾರ್ ಅವರು ಸಿಸೋಡಿಯಾ ಪ್ರಕರಣದ ತನಿಖಾ ಪ್ರಕ್ರಿಯೆಯೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ’ ಎಂದು ಸಿಬಿಐ ಸ್ಪಷ್ಟಪಡಿಸಿದೆ.

ADVERTISEMENT

‘ತಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸುವಂತೆ ಸಿಬಿಐ ಜಿತೇಂದ್ರ ಕುಮಾರ್‌ ಮೇಲೆ ಒತ್ತಡ ಹೇರಲಾಗಿತ್ತು. ಇದರಿಂದಾಗಿಯೇ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಸಿಸೋಡಿಯಾ ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.