ADVERTISEMENT

ಉತ್ತರಪ್ರದೇಶದಲ್ಲಿ ಗೋಮತಿ ನದಿ ಯೋಜನೆ ಅಕ್ರಮ: 43 ಕಡೆ ಸಿಬಿಐ ಶೋಧ

ಪಿಟಿಐ
Published 5 ಜುಲೈ 2021, 7:01 IST
Last Updated 5 ಜುಲೈ 2021, 7:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಉತ್ತರಪ್ರದೇಶದ ಲಖನೌನ ಗೋಮತಿ ನದಿ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ. ಸಮಾಜವಾದಿ ಪಕ್ಷದ ಸರ್ಕಾರದ ಆಡಳಿತ ಅವಧಿಯಲ್ಲಿ ಈ ಯೋಜನೆ ಜಾರಿಗೆ ಬಂದಿದೆ.

‘ಈ ಸಂಬಂಧ ದಾಖಲಿಸಲಾದ ಎಫ್‌ಐಆರ್‌ ಆಧರಿಸಿ ಹಲವು ರಾಜ್ಯಗಳ 43 ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ನಡೆಸುತ್ತಿದೆ.ಸೋಮವಾರ ಬೆಳಿಗ್ಗೆ ಆರಂಭಗೊಂಡಿರುವ ಕಾರ್ಯಾಚರಣೆಯು ಸಂಜೆಯವರೆಗೆ ಮುಂದುವರಿಯುವ ಸಾಧ್ಯತೆಗಳಿವೆ’ ಎಂದು ಅಧಿಕಾರಿಗಳು ತಿಳಿಸಿದರು.

ಉತ್ತರ ಪ್ರದೇಶ ಸರ್ಕಾರದ ಹಲವು ಎಂಜಿನಿಯರ್‌ಗಳು ಸೇರಿದಂತೆ 180 ಅಧಿಕಾರಿಗಳ ಹೆಸರುಗಳು ಎಫ್‌ಐಆರ್‌ನಲ್ಲಿವೆ. ಇದು ಈ ಯೋಜನೆಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಎರಡನೇ ಎಫ್‌ಐಆರ್‌ ಆಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.