ಮುಂಬೈ: ಕೆನರಾ ಬ್ಯಾಂಕ್ಗೆ ₹538 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್ವೇಸ್ ಕಚೇರಿ ಮತ್ತು ಸಂಸ್ಥಾಪಕ ನರೇಶ್ ಗೋಯಲ್ ಅವರ ಮನೆ, ಕಚೇರಿ ಮೇಲೆ ಶನಿವಾರ ಸಿಬಿಐ ದಾಳಿ ನಡೆಸಿದೆ.
ಗೋಯಲ್, ಅವರ ಪತ್ನಿ ಅನಿತಾ ಮತ್ತು ಏರ್ಲೈನ್ಸ್ ಮಾಜಿ ನಿರ್ದೆಶಕ ಗೌರಂಗ್ ಆನಂದ್ ಶೆಟ್ಟಿ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆದಿದೆ.
ಕೆನರಾ ಬ್ಯಾಂಕ್ನ ದೂರಿನ ಆಧಾರದ ಮೇಲೆ ಗೋಯಲ್ ವಿರುದ್ಧ ₹538 ಕೋಟಿ ವಂಚನೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಣವನ್ನು ಬೇರೆಡೆಗೆ ವರ್ಗಾವಣೆ ಸೇರಿದಂತೆ ಹಲವು ಅಕ್ರಮ ಆರೋಪಗಳು ಕಂಪನಿ ಮೇಲಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.