ನಾಗಪುರ: ಭ್ರಷ್ಟಾಚಾರಆರೋಪಕ್ಕೆ ಸಂಬಂಧಿಸಿದಂತೆ ಶನಿವಾರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ನಿವಾಸಿಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.
ಶುಕ್ರವಾರ ರಾತ್ರಿ ನಾಗಪುರಕ್ಕೆ ಬಂದಿಳಿದ ಸಿಬಿಐ ತಂಡ, ಶನಿವಾರ ಬೆಳಿಗ್ಗೆ ನಾಗಪುರದಲ್ಲಿ ಸಿವಿಲ್ ಲೈನ್ಸ್ ಪ್ರದೇಶದ ಜಿಪಿಒ ಚೌಕದಲ್ಲಿರುವ ಸಚಿವರ ನಿವಾಸದಲ್ಲಿ ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾಗಪುರದಿಂದ 60 ಕಿ.ಮೀ ದೂರದಲ್ಲಿರುವ ದೇಶಮುಖ್ ಅವರ ವಿಧಾನಸಭಾ ಕ್ಷೇತ್ರದ ಕಟೋಲ್ ಪಟ್ಟಣಕ್ಕೂ ತಂಡ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸಚಿವರ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಮಾಡಿರುವ ಲಂಚದ ಆರೋಪಗಳನ್ನು ಪರಿಶೀಲಿಸುವಂತೆ ಬಾಂಬೆ ಹೈಕೋರ್ಟ್ ಆದೇಶಿತ್ತು. ಈ ಆದೇಶದ ಮೇರೆಗೆ ಸಿಬಿಐ ಪ್ರಾಥಮಿಕ ತನಿಖೆ ನಡೆಸುವ ಜತೆಗೆ, ದೇಶಮುಖ್ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ದೇಶಮುಖ್ ಅವರ ಮುಂಬೈನ ನಿವಾಸ ಮತ್ತಿತರ ಸ್ಥಳಗಳಲ್ಲೂ ಸಿಬಿಐ ಶೋಧಕಾರ್ಯ ನಡೆಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.