ನವದೆಹಲಿ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರ ಸಹೋದರ ಮತ್ತು ಕಾಂಗ್ರೆಸ್ ನಾಯಕ ಅಗ್ರಸೇನ್ ಗೆಹಲೋತ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಧಪುರಶೋಧ ಕಾರ್ಯಚರಣೆ ನಡೆಸಲಾಗುತ್ತಿದೆ. ಬೇರೆ ಸ್ಥಳಗಳಲ್ಲಿಯೂ ಶೋಧ ನಡೆಸಲಾಗುವುದು ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಕೇಂದ್ರೀಯ ತನಿಖಾ ಸಂಸ್ಥೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಗುರುವಾರವಷ್ಟೇ ಪ್ರಕರಣ ದಾಖಲಿಸಿಕೊಂಡಿತ್ತು.
ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.