ADVERTISEMENT

ಕಲ್ಲಿದ್ದಲು ಕಳ್ಳತನ ಪ್ರಕರಣ: ಉದ್ಯಮಿ ಅಮಿತ್‌ ಅಗರವಾಲ್‌ಗೆ ಸಮನ್ಸ್‌

ಪಿಟಿಐ
Published 17 ಮಾರ್ಚ್ 2021, 9:36 IST
Last Updated 17 ಮಾರ್ಚ್ 2021, 9:36 IST
ಸಿಬಿಐ
ಸಿಬಿಐ   

ಕೋಲ್ಕತ್ತ: ಬಹುಕೋಟಿ ಕಲ್ಲಿದ್ದಲು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಅಮಿತ್‌ ಅಗರವಾಲ್‌ಗೆ ಸಿಬಿಐ ಸಮನ್ಸ್‌ ಜಾರಿಗೊಳಿಸಿದೆ.

‘ಕಿಂಗ್‌ಪಿನ್‌ ಅನೂಪ್‌ ಮಾಝಿ ಸಹಚರರಾಗಿರುವ ಅಗರವಾಲ್‌ಗೆ ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ’ ಎಂದು ಸಿಬಿಐ ಮೂಲಗಳು ಬುಧವಾರ ತಿಳಿಸಿವೆ.

ಕುಲ್ತಿ, ದುರ್ಗಾಪುರ ಮತ್ತು ಕೋಲ್ಕತ್ತದಲ್ಲಿ ಅಗರವಾಲ್‌ಗೆ ಸಂಬಂಧಿಸಿದ ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಮಂಗಳವಾರ ಶೋಧ ಕಾರ್ಯಾಚರಣೆ ನಡೆಸಿದ್ದರು.

ADVERTISEMENT

ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಾಝಿ ತಲೆ ಮರೆಸಿಕೊಂಡಿದ್ದು, ಆತನ ವಿರುದ್ಧ ಪೊಲೀಸರು ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದ್ದಾರೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜಿರಾ, ಅತ್ತಿಗೆ ಮೇನಕಾ ಗಂಭೀರ್, ಗಂಭೀರ್‌ ಮಾವ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ’ ಎಂದು ಸಿಬಿಐ ಅಧಿಕಾರಿಗಳು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.