ADVERTISEMENT

ಜಾರ್ಖಂಡ್‌ ನ್ಯಾಯಾಧೀಶನ ಹತ್ಯೆ: ತನಿಖೆ ವಹಿಸಿಕೊಂಡ ಸಿಬಿಐ

ಪಿಟಿಐ
Published 4 ಆಗಸ್ಟ್ 2021, 14:11 IST
Last Updated 4 ಆಗಸ್ಟ್ 2021, 14:11 IST
ಸಿಬಿಐ
ಸಿಬಿಐ   

ನವದೆಹಲಿ: ಜಾರ್ಖಂಡ್‌ನ ಧನಬಾದ್ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಸಾವಿನ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

‘ಪ್ರಕರಣದ ತನಿಖೆ ವಹಿಸಿಕೊಳ್ಳುವಂತೆ ಜಾರ್ಖಂಡ್‌ ಸರ್ಕಾರ ಸಲ್ಲಿಸಿದ್ದ ಮನವಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ಕುರಿತು ಧನಬಾದ್‌ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಅನ್ನು ಸಹ ಪಡೆದುಕೊಳ್ಳಲಾಗಿದೆ’ ಎಂದು ಸಿಬಿಐ ಮೂಲಗಳು ಹೇಳಿವೆ.

ಉತ್ತಮ್ ಆನಂದ್ ಅವರು ಧನಬಾದ್ ಪಟ್ಟಣದ ಜಡ್ಜಸ್ ಕಾಲೊನಿಯಲ್ಲಿ ಜುಲೈ 28ರಂದು ಬೆಳಿಗ್ಗೆ 5 ಗಂಟೆಯಲ್ಲಿ ಜಾಗಿಂಗ್ ಹೊರಟಿದ್ದರು. ಆಗ ವಾಹನವೊಂದು ಡಿಕ್ಕಿ ಹೊಡೆದು, ಪರಾರಿಯಾಗಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ದಾರಿಹೋಕರೊಬ್ಬರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಘೋಷಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.