ADVERTISEMENT

ಕೇಂದ್ರ ಸರ್ಕಾರದ ಸಾಧನೆಯ ಕರಪತ್ರ ಮನೆ ಮನೆಗೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2020, 20:25 IST
Last Updated 13 ಜೂನ್ 2020, 20:25 IST
ರಾಮೋಹಳ್ಳಿಯಲ್ಲಿ ಮನೆ–ಮನೆಗೆ ತೆರಳಿ ಸರ್ಕಾರದ ಸಾಧನೆಯ ಕರಪತ್ರವನ್ನು ಸಚಿವ ಎಸ್.ಟಿ. ಸೋಮಶೇಖರ್ ವಿತರಿಸಿದರು
ರಾಮೋಹಳ್ಳಿಯಲ್ಲಿ ಮನೆ–ಮನೆಗೆ ತೆರಳಿ ಸರ್ಕಾರದ ಸಾಧನೆಯ ಕರಪತ್ರವನ್ನು ಸಚಿವ ಎಸ್.ಟಿ. ಸೋಮಶೇಖರ್ ವಿತರಿಸಿದರು   

ರಾಜರಾಜೇಶ್ವರಿನಗರ: ‘ಸರ್ಕಾರದ ಸವಲತ್ತುಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ವಿವರಿಸುವ ಕರಪತ್ರಗಳನ್ನು ರಾಮೋಹಳ್ಳಿಯಲ್ಲಿ ಮನೆಮನೆಗೆ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಆಯುಷ್ಮಾನ್ ಭಾರತ ಯೋಜನೆ, ಅಟಲ್ ಪೆನ್ಷನ್, ಪ್ರಧಾನಮಂತ್ರಿ ಕಿಸಾನ್ ಯೋಜನೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಮೋದಿ ಸಮರ್ಥ ನಾಯಕ ಎನಿಸಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.