ನವದೆಹಲಿ: ‘ಯಸ್’ ಚಂಡಮಾರುತದಿಂದ ಉಂಟಾದ ಹಾನಿ ಬಗ್ಗೆ ಪರಿಶೀಲಿಸಲು ಗೃಹ ಸಚಿವಾಲಯದ (ಎಂಎಚ್ಎ) ಜಂಟಿ ಕಾರ್ಯದರ್ಶಿ ನೇತೃತ್ವದ ತಂಡವುಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.
‘ಮೇ 26ರಂದು ‘ಯಸ್’ ಚಂಡಮಾರುತವು ಒಡಿಶಾಗೆ ಅಪ್ಪಳಿಸಿತು. ಈ ಸಂದರ್ಭದಲ್ಲಿ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರಿ ಹಾನಿ ಉಂಟಾಗಿದೆ. ಇದನ್ನು ಪರಿಶೀಲಿಸಲು ಕೇಂದ್ರದ ತಂಡವು ಪಶ್ಚಿಮ ಬಂಗಾಳದಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದೆ’ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದರು.
ಇದನ್ನೂ ಓದಿ... 9.27 ಲಕ್ಷ ಮಕ್ಕಳಲ್ಲಿ ತೀವ್ರ ಸ್ವರೂಪದ ಅಪೌಷ್ಟಿಕತೆ: ಮಕ್ಕಳ ಅಭಿವೃದ್ಧಿ ಸಚಿವಾಲಯ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.