ADVERTISEMENT

‘ಚಿದಂಬರಂ ವಿಚಾರಣೆಗೆ ಅಗತ್ಯ ಅನುಮತಿ ಇದೆ’

ಪಿಟಿಐ
Published 26 ನವೆಂಬರ್ 2018, 20:15 IST
Last Updated 26 ನವೆಂಬರ್ 2018, 20:15 IST
ಚಿದಂಬರಂ
ಚಿದಂಬರಂ   

ನವದೆಹಲಿ: ಏರ್‌ಸೆಲ್‌– ಮ್ಯಾಕ್ಸಿಸ್‌ ಹಗರಣದ ಸಂಬಂಧ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ವಿಚಾರಣೆಗೆ ಒಳಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಂದ ಅಗತ್ಯ ಅನುಮತಿ ಪಡೆಯಲಾಗಿದೆ ಎಂದು ದೆಹಲಿ ನ್ಯಾಯಾಲಯಕ್ಕೆ ಸಿಬಿಐ ಸೋಮವಾರ ತಿಳಿಸಿತು.

ಇದೇ ವೇಳೆ,ಪ್ರಕರಣದ ಇತರ ಕೆಲವು ಆರೋಪಿಗಳ ವಿಚಾರಣೆಗೆ ಅನುಮತಿ ಪಡೆಯಲು ಸಿಬಿಐಗೆ ನ್ಯಾಯಾಲಯ ಮೂರು
ವಾರಗಳ ಅವಕಾಶ ನೀಡಿತು.

ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಅವರನ್ನು ಬಂಧಿಸದಂತೆ ಇರುವ ತಡೆಯಾಜ್ಞೆಯನ್ನು ಡಿಸೆಂಬರ್ 18ರವರೆಗೆ ವಿಸ್ತರಿಸಿದ ವಿಶೇಷ ನ್ಯಾಯಮೂರ್ತಿ ಒ.ಪಿ. ಸೈನಿ ಅವರು ಮುಂದಿನ ವಿಚಾರಣೆಯನ್ನು ಸಹ ಅದೇ ದಿನಾಂಕಕ್ಕೆ ನಿಗದಿಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.