ADVERTISEMENT

ಇಟಲಿ ನಾವಿಕರ ವಿರುದ್ಧದ ಪ್ರಕರಣ ಮುಕ್ತಾಯಕ್ಕೆ ‘ಸುಪ್ರೀಂ’ಗೆ ಕೇಂದ್ರ ಅರ್ಜಿ

ಪಿಟಿಐ
Published 3 ಜುಲೈ 2020, 16:28 IST
Last Updated 3 ಜುಲೈ 2020, 16:28 IST
ಇಟಲಿಯ ನಾವಿಕರಾದ ಸಲ್ವಟೋರ್‌ ಗಿರೋನ್‌ ಮತ್ತು ಮ್ಯಾಸಿಮಿಲಿಯಾನೊ ಲಟೋರೆ
ಇಟಲಿಯ ನಾವಿಕರಾದ ಸಲ್ವಟೋರ್‌ ಗಿರೋನ್‌ ಮತ್ತು ಮ್ಯಾಸಿಮಿಲಿಯಾನೊ ಲಟೋರೆ   

ನವದೆಹಲಿ: ಕೇರಳದ ಕರಾವಳಿಯಲ್ಲಿ ಭಾರತದ ಇಬ್ಬರು ಮೀನುಗಾರರನ್ನು ಹತ್ಯೆ ಮಾಡಿದ ಆರೋಪದಲ್ಲಿ ಇಟಲಿಯ ಇಬ್ಬರು ನಾವಿಕರ ವಿರುದ್ಧ ನಡೆಯುತ್ತಿರುವ ನ್ಯಾಯಾಂಗ ಪ್ರಕರಣವನ್ನು ಮುಕ್ತಾಯಗೊಳಿಸಲು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಹೇಗ್‌ನಲ್ಲಿರುವ ವ್ಯಾಜ್ಯಗಳ ಕಾಯಂ ನ್ಯಾಯಾಲಯವು (ಪಿಸಿಎ) ನೀಡಿರುವ ತೀರ್ಪಿನ ಬೆನ್ನಲ್ಲೇ ಕೇಂದ್ರ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ. ಭಾರತದ ಪರವಾಗಿ ತೀರ್ಪು ನೀಡಿದ್ದ ಪಿಸಿಎ, ಮೃತ ಮೀನುಗಾರರ ಕುಟುಂಬಕ್ಕೆ ಪರಿಹಾರ ಒದಗಿಸಲು ಆದೇಶಿಸಿತ್ತು. ಆದರೆ, ನಾವಿಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿಲ್ಲ ಎಂದು ಸೂಚಿಸಿತ್ತು.

ಪ್ರಕರಣವೇನು?: 2012 ಫೆಬ್ರುವರಿಯಲ್ಲಿ ಕೇರಳ ಕರಾವಳಿಯ ಭಾರತದ ಜಲಪ್ರದೇಶದಲ್ಲಿ ಇಬ್ಬರು ಭಾರತೀಯ ಮೀನುಗಾರರನ್ನು ತೈಲ ಹಡಗು ಎಂ.ವಿ ಎನ್‌ರಿಕಾ ಲೆಕ್ಸಿಯಲ್ಲಿದ್ದ ಇಟಲಿಯ ನಾವಿಕರಾದ ಸಲ್ವಟೋರ್‌ ಗಿರೋನ್‌ ಮತ್ತು ಮ್ಯಾಸಿಮಿಲಿಯಾನೊ ಲಟೋರೆ ಹತ್ಯೆ ಮಾಡಿದ್ದಾರೆ ಎಂದು ಭಾರತ ಆರೋಪಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.