ADVERTISEMENT

ದೆಹಲಿ:ಮನೆ ಬಾಗಿಲಿಗೆ ಪಡಿತರ ಯೋಜನೆಗೆ ಕೇಂದ್ರ ತಡೆ

ಪಿಟಿಐ
Published 5 ಜೂನ್ 2021, 14:07 IST
Last Updated 5 ಜೂನ್ 2021, 14:07 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೆಹಲಿಯಲ್ಲಿ ಜನರ ಮನೆ ಬಾಗಿಲಿಗೇ ಪಡಿತರ ತಲುಪಿಸಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸರ್ಕಾರ ರೂಪಿಸಿದ್ದ ಯೋಜನೆಯನ್ನು ಕೇಂದ್ರ ಸರ್ಕಾರ ತಡೆ ಹಿಡಿದಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

‘ಯೋಜನೆಯನ್ನು ಜಾರಿಗೊಳಿಸುವ ಮುನ್ನ, ಕೇಂದ್ರದಿಂದ ಅನುಮೋದನೆ ಪಡೆದಿಲ್ಲ ಎಂಬ ಕಾರಣ ನೀಡಿ ಇಂಥ ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿವೆ.

ಮಹತ್ವಾಕಾಂಕ್ಷೆಯ ಈ ಯೋಜನೆಗೆ ಮುಂದಿನ ವಾರ ಚಾಲನೆ ನೀಡಲು ದೆಹಲಿ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು ಎಂದು ಇವೇ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.