ADVERTISEMENT

ರಾಷ್ಟ್ರಧ್ವಜ ಹಾರಿಸಲು ಉತ್ತೇಜಿಸಿ: ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಪತ್ರ

ಪಿಟಿಐ
Published 10 ಆಗಸ್ಟ್ 2022, 11:26 IST
Last Updated 10 ಆಗಸ್ಟ್ 2022, 11:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ‘ಹರ್‌ ಘರ್‌ ತಿರಂಗಾ’ ಅಭಿಯಾನದ ಅಡಿಯಲ್ಲಿ ಆಗಸ್ಟ್‌ 13ರಿಂದ 15ರ ವರೆಗೆ ಪ್ರತಿ ಮನೆಯ ಮೇಲೂ ರಾಷ್ಟ್ರಧ್ವಜ ಹಾರಿಸಲು ಜನರಿಗೆ ಉತ್ತೇಜನ ನೀಡುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಒತ್ತಾಯಿಸಿದೆ.

‘ಜನರ ಹೃದಯದಲ್ಲಿ ದೇಶಪ್ರೇಮ ಮೂಡಿಸಲು ಮತ್ತು ದೇಶ ಕಟ್ಟಲು ದಣಿವರಿಯದೆ ದುಡಿದವರನ್ನು ಸ್ಮರಿಸಲು ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಲು ಜನರನ್ನು ಉತ್ತೇಜಿಸಬೇಕು’ ಎಂದು ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ಪತ್ರ ಬರೆದು ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.