ADVERTISEMENT

ದೊಡ್ಡವರ ಅನುಕೂಲಕ್ಕಾಗಿ ಮಾಡಿದ ಕೃಷಿ ಕಾಯ್ದೆಗಳು: ದಿಗ್ವಿಜಯ್ ಸಿಂಗ್ ವಾಗ್ದಾಳಿ

ಕೇಂದ್ರದ ವಿರುದ್ಧ ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಾಗ್ದಾಳಿ

ಪಿಟಿಐ
Published 8 ಡಿಸೆಂಬರ್ 2020, 8:27 IST
Last Updated 8 ಡಿಸೆಂಬರ್ 2020, 8:27 IST
ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್   

ಇಂದೋರ್‌: ‘ದೊಡ್ಡ ವ್ಯಕ್ತಿಗಳಿಗೆ‘ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದೆ ‘ ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ವಿವಿಧ ರೈತ ಪರ ಸಂಘಟನೆಗಳು ಕರೆ ನೀಡಿರುವ ‘ಭಾರತ್‌ಬಂದ್‌‘ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಕೇಂದ್ರದ ಕಾಯ್ದೆಗಳ ವಿರುದ್ಧ ಕಿಡಿ ಕಾರಿದರು.

‘ರೂಪಾಯಿ ಅಪಮೌಲ್ಯೀಕರಣ ಮತ್ತು ಜಿಎಸ್‌ಟಿ ಅನುಷ್ಠಾನದ ನಂತರ ಮೋದಿ ಸರ್ಕಾರ, ದೊಡ್ಡ ದೊಡ್ಡ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲು ಕೃಷಿ ಕ್ಷೇತ್ರಕ್ಕೆ ಅಪಾಯವಾಗುವಂತಹ ಕಾಯ್ದೆಗಳನ್ನು ಜಾರಿಗೆ ತಂದಿದೆ‘ ಎಂದು ದೂರಿದೆ.

ADVERTISEMENT

‘ಹೊಸ ಕಾಯ್ದೆಗಳನ್ನು ರದ್ದುಗೊಳಿಸಬೇಕು‘ ಎಂದು ಒತ್ತಾಯಿಸಿದ ದಿಗ್ವಿಜಯ್ ಸಿಂಗ್, ‘ಈ ಸಮಸ್ಯೆಯನ್ನು ಬಗೆಹರಿಸಲು ‘ಜಂಟಿ ಸದನ ಸಮಿತಿ‘ಯನ್ನು ರಚಿಸಬೇಕು. ರೈತರ ಮುಖಂಡರು ಮತ್ತು ಜಂಟಿ ಸದನ ಸಮಿತಿ ಸದಸ್ಯರೊಂದಿಗೆ ಚರ್ಚಿಸಬೇಕು‘ ಎಂದು ಪ್ರಧಾನಿಯವರನ್ನು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.