ಬಿಜ್ನೋರ್: ಆಜಾದ್ ಸಮಾಜ್ ಪಕ್ಷದ (ಕಾನ್ಷಿರಾಮ್) ಅಧ್ಯಕ್ಷ ಚಂದ್ರಶೇಖರ್ ಆಜಾದ್ಗೆ ವಾಟ್ಸ್ಆ್ಯಪ್ ಮೂಲಕ ಕೊಲೆ ಬೆದರಿಕೆ ಬಂದಿದ್ದು, ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಚಂದ್ರಶೇಖರ್ ಅವರನ್ನು 10 ದಿನಗಳಲ್ಲಿ ಕೊಲೆ ಮಾಡುವುದಾಗಿ ಪಕ್ಷದ ಸಹಾಯವಾಣಿ ವಾಟ್ಸ್ಆ್ಯಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿರುವುದಾಗಿ ಕಾರ್ಯಕರ್ತ ಶೇಕ್ ಪರ್ವೇಜ್ ದೂರು ದಾಖಲಿಸಿದ್ದಾರೆ ಎಂದು ನಗಿನಾ ಠಾಣಾಧಿಕಾರಿ ತೇಜ್ಪಾಲ್ ಸಿಂಗ್ ತಿಳಿಸಿದ್ದಾರೆ.
ಆಜಾದ್ ಅವರು ಉತ್ತರ ಪ್ರದೇಶದ ನಗಿನಾ ಲೋಕಸಭಾ ಕ್ಷೇತ್ರದ ಸಂಸದ.
ದೂriನನ್ವಯ ಅಪರಿಚಿತ ವ್ಯಕ್ತಿ ವಿರುದ್ಧ ವಿವಿಧ ಸೆಕ್ಷನ್ಗಳಡಿ ಎಫ್ಐಆರ್ ದಾಖಲಿಸಿ ತನಿಖೆ ಪ್ರಾಂಭಿಸಲಾಗಿದೆ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.
ಪರ್ವೇಜ್, ಪಕ್ಷದ ಮುಸ್ಲಿಂ ಬ್ರದರ್ಹುಡ್ ಸಮಿತಿಯ ಜಿಲ್ಲಾ ಸಮನ್ವಯಕಾರನಾಗಿದ್ದಾರೆ. ಬೆದರಿಕೆಯಿಂದ ಆಜಾದ್ ಅವರ ಪ್ರಾಣಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.