ADVERTISEMENT

ಕಾಂಗ್ರೆಸ್‌ ನಾಯಕತ್ವ ಬದಲಾವಣೆ ಮತ್ತೆ ಮುನ್ನೆಲೆಗೆ: ಅನಿವಾರ್ಯ ಎಂದ ಶಶಿ ತರೂರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಮಾರ್ಚ್ 2022, 3:21 IST
Last Updated 11 ಮಾರ್ಚ್ 2022, 3:21 IST
ಶಶಿ ತರೂರ್‌
ಶಶಿ ತರೂರ್‌   

ನವದೆಹಲಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ ತೀವ್ರ ಹಿನ್ನಡೆ ಅನುಭವಿಸಿದೆ. ಇದರ ಬೆನ್ನಲ್ಲೇ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ನಾಯಕತ್ವಬದಲಾವಣೆ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಸಂಸದ ಶಶಿ ತರೂರ್‌, ‘ಮುಂಬರುವ ಚುನಾವಣೆಗಳಲ್ಲಿ ಪಕ್ಷಕ್ಕೆ ಗೆಲುವು ಸಿಗಬೇಕು. ಜನರ ವಿಶ್ವಾಸ ಗಳಿಸಬೇಕು ಎಂದಾದಲ್ಲಿ ಪಕ್ಷದ ಸಂಘಟನೆ ಹಾಗೂ ನಾಯಕತ್ವ ಬಲಗೊಳ್ಳುವುದು ಅಗತ್ಯ ಹಾಗೂ ಅನಿವಾರ್ಯ’ ಎಂದು ಹೇಳಿದ್ದಾರೆ.

‘ಕಾಂಗ್ರೆಸ್‌ ನಂಬಿದ ಭಾರತವನ್ನು ಕಟ್ಟಬೇಕು. ಆದರೆ, ಕಾಂಗ್ರೆಸ್‌ನ ಶಕ್ತಿಯಲ್ಲಿ ನಂಬಿಕೆ ಹೊಂದಿರುವ ನಮಗೆ ಈ ಚುನಾವಣೆಯ ಫಲಿತಾಂಶದಿಂದ ನೋವಾಗಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.