ADVERTISEMENT

Punjab| ಸಿಎಂ ಅಭ್ಯರ್ಥಿ ಘೋಷಿಸಿ: ವೇದಿಕೆಯಲ್ಲೇ ರಾಹುಲ್‌ಗೆ ಮನವಿ ಮಾಡಿದ ಚನ್ನಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಜನವರಿ 2022, 15:36 IST
Last Updated 27 ಜನವರಿ 2022, 15:36 IST
ಚರಣ್‌ಜಿತ್‌ ಸಿಂಗ್‌ ಚನ್ನಿ
ಚರಣ್‌ಜಿತ್‌ ಸಿಂಗ್‌ ಚನ್ನಿ   

ಚಂಡೀಗಢ: ಪಂಜಾಬ್‌ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವಂತೆ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ವೇದಿಕೆಯಲ್ಲೇ ಮನವಿ ಮಾಡಿದರು.

‘ಪಂಜಾಬ್‌ನಲ್ಲಿ ನಡೆದ ಚುನಾವಣಾ ಪ್ರಚಾರದ ವರ್ಚುವಲ್‌ ರ್‍ಯಾಲಿಯಲ್ಲಿ ಭಾಷಣ ಮಾಡುತ್ತಿದ್ದ ಚನ್ನಿ, ‘ ನಮ್ಮ ನಡುವೆ ಯಾವುದೇ ಜಗಳವಿಲ್ಲ. ಪಂಜಾಬ್ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿ. ನಾವೆಲ್ಲ ಒಗ್ಗಟ್ಟಾಗಿ ನಿಲ್ಲುತ್ತೇವೆ’ ಎಂದು ಹೇಳಿದರು.

ಅಲ್ಲದೆ, ಭಾಷಣ ಮಾಡುತ್ತಲೇ ತಾವಿರುವ ಜಾಗಕ್ಕೆ ನವಜೋತ್‌ ಸಿಂಗ್‌ ಸಿಧು ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಆಹ್ವಾನಿಸಿದ ಚನ್ನಿ ಅವರನ್ನೆಲ್ಲ ತಬ್ಬಿ ಒಗ್ಗಟ್ಟು ಪ್ರದರ್ಶಿಸಿದರು.

ADVERTISEMENT

ನಂತರ ಮಾತನಾಡಿದ ರಾಹುಲ್‌ ಗಾಂಧಿ, ‘ಪಂಜಾಬ್‌ನ ಕಾಂಗ್ರೆಸ್‌ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.