ADVERTISEMENT

ಕಾಶಿಯಲ್ಲಿ ಮೋದಿಯಿಂದ ಶಿವಾಜಿ ಮಹಾರಾಜರಿಗೆ ಗೌರವ, ಕರ್ನಾಟಕದಲ್ಲಿ ಅವಮಾನ: ರಾವುತ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಡಿಸೆಂಬರ್ 2021, 11:12 IST
Last Updated 18 ಡಿಸೆಂಬರ್ 2021, 11:12 IST
   

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅಗೌರವ ತೋರಿಸಿದ ಘಟನೆಯನ್ನು ಶಿವಸೇನಾ ಮುಖಂಡ ಸಂಜಯ್‌ ರಾವುತ್‌ ಖಂಡಿಸಿದ್ದಾರೆ.

ಈ ಕುರಿತು ಶನಿವಾರ ಟ್ವೀಟ್‌ ಮಾಡಿರುವ ಅವರು, ‘ಒಂದೆಡೆ ಛತ್ರಪತಿ ಶಿವಾಜಿ ಮಹಾರಾಜರನ್ನು ಪ್ರಧಾನಿ ಮೋದಿಯವರು ಕಾಶಿಯಲ್ಲಿ ಗೌರವಿಸುತ್ತಾರೆ. ಮತ್ತೊಂದೆಡೆ ಕರ್ನಾಟಕದಲ್ಲಿ ನಮ್ಮ ಮಹಾರಾಜರಿಗೆ ಅವಮಾನ ಮಾಡಲಾಗಿದೆ. ಬಿಜೆಪಿ ಆಡಳಿತವಿರುವ ಕರ್ನಾಟಕದ ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ‘ ಎಂದು ತಿಳಿಸಿದ್ದಾರೆ.

ಶಿವಾಜಿ ಪುತ್ಥಳಿಗೆ ಮಸಿ ಸುರಿಯುತ್ತಿರುವ ದೃಶ್ಯವನ್ನು ಹಂಚಿಕೊಂಡಿರುವ ರಾವುತ್‌, ‘ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಹಿಂದೂಗಳೇ ಎದ್ದೇಳಿ ಎಚ್ಚೆತ್ತುಕೊಳ್ಳಿ‘ ಎಂದು ಟ್ವೀಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.