ADVERTISEMENT

ಕಲ್ಲಿದ್ದಲು ತೆರಿಗೆ ಹಗರಣ: ಐಎಎಸ್‌ ಅಧಿಕಾರಿ ಬಂಧಿಸಿದ ಇ.ಡಿ

​ಪ್ರಜಾವಾಣಿ ವಾರ್ತೆ
Published 23 ಜುಲೈ 2023, 5:05 IST
Last Updated 23 ಜುಲೈ 2023, 5:05 IST
.
.   

ರಾಯ್‌ಪುರ, (ಛತ್ತೀಸ್‌ಗಢ) : ಕಲ್ಲಿದ್ದಲು ತೆರಿಗೆ ಹಗರಣ ಕುರಿತ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಐಎಎಸ್‌ ಅಧಿಕಾರಿ ರಾನು ಸಾಹು ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಶನಿವಾರ ಬಂಧಿಸಿದೆ. 

ರಾಜ್ಯ ಕೃಷಿ ಇಲಾಖೆ ನಿರ್ದೇಶಕಿ ಸಾಹು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮೂರು ದಿನಗಳ ಇ.ಡಿ ವಶಕ್ಕೆ ನೀಡಲಾಗಿದೆ. ಇವರು, ಈ ಪ್ರಕರಣದಲ್ಲಿ ಬಂಧನಕ್ಕೊಳಗಾದ ರಾಜ್ಯದ ಎರಡನೇ ಐಎಎಸ್ ಅಧಿಕಾರಿ.

ತನಿಖಾ ಸಂಸ್ಥೆ ಶುಕ್ರವಾರವಷ್ಟೇ ಅಧಿಕಾರಿ ನಿವಾಸದ ಮೇಲೆ ದಾಳಿ ನಡೆಸಿತ್ತು. ಅವರ ಬಳಿ ₹5.52 ಕೋಟಿ ಸ್ಥಿರಾಸ್ತಿ ಪತ್ತೆಯಾಗಿದೆ ಎಂದು ಇ.ಡಿ ವಕೀಲ ಸೌರಭ್ ಪಾಂಡೆ ಹೇಳಿದ್ದಾರೆ.

ADVERTISEMENT

ರಾಯಗಢ ಮತ್ತು ಕೊರ್ಬಾ ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಸಾಹು ಹಣ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾಗಿರುವುದು ಪ್ರಕರಣದ ತನಿಖೆಯಿಂದ ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.