ADVERTISEMENT

ಮಾವೋವಾದಿಗಳಿಂದ ಬಿಜೆಪಿ ಕಾರ್ಯಕರ್ತನ ಹತ್ಯೆ

ಪಿಟಿಐ
Published 6 ಫೆಬ್ರುವರಿ 2023, 11:16 IST
Last Updated 6 ಫೆಬ್ರುವರಿ 2023, 11:16 IST
.
.   

ಬಿಜಾಪುರ, ಛತ್ತೀಸ್‌ಗಢ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 40 ವರ್ಷದ ಬಿಜೆಪಿ ಕಾರ್ಯಕರ್ತ ನೀಲಕಂಠ ಕಕೇಮ್‌ ಅವರನ್ನು ಮಾವೋವಾದಿಗಳು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ನೀಲಕಂಠ ಕಕೇಮ್‌ ಅವರು ಆವಪಲ್ಲಿ ಮಂಡಲದ ಅಧ್ಯಕ್ಷರಾಗಿದ್ದರು. ಅವರು ತಮ್ಮ ಕುಟುಂಬಸ್ಥರೊಂದಿಗೆ ಸಂಬಂಧಿಕರ ಮದುವೆಗೆ ಹೋಗಿದ್ದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರ ಮೇಲೆ ಅಪರಿಚಿತ ಮಾವೋವಾದಿಗಳು ಏಕಾಏಕಿ ಚೂಪಾದ ಆಯುಧಗಳಿಂದ ದಾಳಿ ನಡೆಸಿದ್ದು, ಕಕೇಮ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಭಾನುವಾರ ನಡೆದಿದೆ ಎಂದು ಐಜಿಪಿ ಸುಂದರ್‌ ರಾಜ್‌ ಪಿ. ತಿಳಿಸಿದ್ದಾರೆ.

ದಾಳಿಕೋರರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.