ರಾಯ್ಪುರ:ಛತ್ತೀಸಗಡದ ಸುಕ್ಮಾ-ಬಿಜಾಪುರದಲ್ಲಿ ನಕ್ಸಲರು ನಡೆಸಿದ ದಾಳಿ ವೇಳೆ ಗಾಯಗೊಂಡಿದ್ದ ಯೋಧರ ಆರೋಗ್ಯ ವಿಚಾರಿಸಲು ಇಲ್ಲಿನ ನಾರಾಯಣ ಸೂಪರ್ಸ್ಪೆಷಾಲಿಟಿ ಆಸ್ಪತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದರು. ಅವರೊಂದಿಗೆ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರೂ ಇದ್ದರು.
ಇದಕ್ಕೂ ಮೊದಲು ಈ ಇಬ್ಬರು ನಾಯಕರು ದಾಳಿ ವೇಳೆ ಮೃತಪಟ್ಟಿದ್ದ ಯೋಧರ ಶವಪೆಟ್ಟಿಗೆಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದರು.ಬಳಿಕ ಸಭೆ ನಡೆಸಿದ್ದರು. ಈ ಕುರಿತುಮಾತನಾಡಿದ್ದ ಶಾ, 'ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹಾಗೂ ರಕ್ಷಣಾ ಪಡೆಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ್ದೇನೆ.ಈ ಹೋರಾಟವು ದುರ್ಬಲಗೊಳ್ಳಬಾರದು ಎಂದು ಅಧಿಕಾರಿಗಳು ಹೇಳಿದ್ದಾರೆ. ಇದು ಸೈನಿಕರ ಸ್ಥೈರ್ಯವನ್ನು ತೋರಿಸುತ್ತದೆ'ಎಂದುಹೇಳಿದ್ದರು.
ಬಿಜಾಪುರ ಜಿಲ್ಲೆಯಲ್ಲಿರುವ ಸಿಆರ್ಪಿಎಫ್ ಶಿಬಿರರಕ್ಕೂ ಅವರು ಭೇಟಿ ನೀಡಿದರು.
ಸುಕ್ಮಾ-ಬಿಜಾಪುರದಲ್ಲಿ ನಕ್ಸಲರು ನಡೆಸಿದ ದಾಳಿ ವೇಳೆ 22 ಮಂದಿ ರಕ್ಷಣಾ ಸಿಬ್ಬಂದಿ ಮೃತಪಟ್ಟಿದ್ದರು. 30ಕ್ಕೂ ಹೆಚ್ಚುಯೋಧರು ಗಾಯಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.