ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಸೋಮವಾರವಷ್ಟೇ ಮುಖ್ಯನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ಎಸ್.ಎ.ಬೊಬಡೆ ನೇತೃತ್ವದ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು.
ಕಳೆದ 90 ದಿನದಿಂದ ಚಿದಂಬರಂ ಅವರು ಜೈಲಿನಲ್ಲಿದ್ದು, ಇವರು ಸಲ್ಲಿಸಿರುವ ಅರ್ಜಿ ಮಂಗಳವಾರ ಅಥವಾ ಬುಧವಾರ ವಿಚಾರಣೆಗೆ ಬರಲಿದೆ ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ತಿಳಿಸಿದ್ದಾರೆ. ‘ಚಿದಂಬರಂ ಅವರ ಮೇಲಿರುವ ಆರೋಪಗಳು ಗಂಭೀರವಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ದೆಹಲಿ ಹೈಕೋರ್ಟ್,ಚಿದಂಬರಂ ಜಾಮೀನು ಅರ್ಜಿಯನ್ನು ಕಳೆದ ಶುಕ್ರವಾರ ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.