ADVERTISEMENT

20 ಮಕ್ಕಳನ್ನು ಒತ್ತೆಯಾಗಿರಿಸಿದ ಕೊಲೆ ಆರೋಪಿ

ಪಿಟಿಐ
Published 30 ಜನವರಿ 2020, 20:01 IST
Last Updated 30 ಜನವರಿ 2020, 20:01 IST
   

ಫಾರುಖಾಬಾದ್‌ (ಉತ್ತರಪ್ರದೇಶ): ಕೊಲೆ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬ ಇಲ್ಲಿನ ಕಸಾರಿಯಾ ಎಂಬ ಹಳ್ಳಿಯ ಮನೆಯೊಂದರಲ್ಲಿ 20 ಮಕ್ಕಳನ್ನು ಒತ್ತೆಯಾಳಾಗಿರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಹುಟ್ಟು ಹಬ್ಬದ ಆಚರಣೆಗೆಂದು ಮಕ್ಕಳನ್ನು ಆಹ್ವಾನಿಸಿದ ಸುಭಾಶ್‌ ಭಾತಮ್‌ ಎಂಬಾತ, ಮಾತುಕತೆ ನಡೆಸಲು ಯತ್ನಿಸಿದವರ ಮೇಲೆ ಮನೆಯೊಳಗಿನಿಂದಲೇ ಗುಂಡು ಹಾರಿಸಿದ್ದಾನೆ. ಮಕ್ಕಳ ರಕ್ಷಣೆಗೆ ಆದ್ಯತೆ ನೀಡಲಾಗಿದ್ದು, ಅಗತ್ಯ ಬಿದ್ದಲ್ಲಿ ಕಾರ್ಯಾಚರಣೆಗೆ ಎನ್‌ಎಸ್‌ಜಿಯನ್ನು ಕರೆಯಲಾಗುವುದು’ ಎಂದು ಡಿಜಿಪಿ ಒ.ಪಿ.ಸಿಂಗ್‌ ತಿಳಿಸಿದರು.ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಆರೋಪಿ ಮಾನಸಿಕ ಅಸ್ವಸ್ಥನಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT