ADVERTISEMENT

ಉತ್ತರ ಪ್ರದೇಶ: ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ ಖುಲಾಸೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2021, 20:14 IST
Last Updated 26 ಮಾರ್ಚ್ 2021, 20:14 IST
ಕೋರ್ಟ್‌
ಕೋರ್ಟ್‌   

ಲಖನೌ: ಅತ್ಯಾಚಾರ ಎಸಗುವ ಉದ್ದೇಶದಿಂದ ಕಾನೂನು ವಿದ್ಯಾರ್ಥಿನಿಯನ್ನು ಬಂಧನದಲ್ಲಿ ಇರಿಸಿದ್ದ ಆರೋಪ ಎದುರಿಸುತ್ತಿದ್ದ ಬಿಜೆಪಿ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಅವರನ್ನು ಇಲ್ಲಿನ ವಿಶೇಷ ಕೋರ್ಟ್‌ ಶುಕ್ರವಾರ ಖುಲಾಸೆಗೊಳಿಸಿದೆ.

‘ಸ್ವಾಮಿ ಚಿನ್ಮಯಾನಂದ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವ ಸಾಕ್ಷ್ಯಗಳನ್ನು ಒದಗಿಸುವಲ್ಲಿ ಪ್ರಾಸಿಕ್ಯೂಷನ್‌ ವಿಫಲವಾಗಿದೆ’ ಎಂದು ವಿಶೇಷ ನ್ಯಾಯಾಧೀಶ ಪಿ.ಕೆ.ರೈ ಅಭಿಪ್ರಾಯಪಟ್ಟರು.

ಅದೇ ರೀತಿ, ಸ್ವಾಮಿ ಚಿನ್ಮಯಾನಂದ ಅವರಿಂದ ಹಣ ವಸೂಲಿಗಾಗಿ ಯತ್ನಿಸಿದ ಆರೋಪದಿಂದ ಕಾನೂನು ವಿದ್ಯಾರ್ಥಿನಿ, ಇತರ ಆರೋಪಿಗಳಾದ ಸಂಜಯ್‌ ಸಿಂಗ್‌, ಡಿ.ಪಿ.ಎಸ್‌.ರಾಠೋಡ್‌, ವಿಕ್ರಮ್‌ ಸಿಂಗ್‌, ಸಚಿನ್‌ ಸಿಂಗ್‌ ಹಾಗೂ ಅಜಿತ್‌ ಸಿಂಗ್‌ ಅವರನ್ನು ಸಹ ಕೋರ್ಡ್‌ ಖುಲಾಸೆಗೊಳಿಸಿ ಆದೇಶಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.