ಶಹಜಹಾನ್ಪುರ (ಉತ್ತರಪ್ರದೇಶ): ಕಾನೂನು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಬುಧವಾರ ಶಹಜಹಾನ್ಪುರ ಜೈಲಿನಿಂದ ಬಿಡುಗಡೆಯಾದರು.
‘ಅವರಿಗೆ ಎರಡು ದಿನಗಳ ಹಿಂದೆ ಜಾಮೀನು ದೊರೆತಿದೆ. ಕಾನೂನು ವಿಧಿ–ವಿಧಾನಗಳನ್ನು ಪೂರ್ಣಗೊಳಿಸಿದ ಬಳಿಕ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ’ ಎಂದು ಜೈಲಿನ ಅಧೀಕ್ಷಕ ರಾಕೇಶ್ ಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.