ADVERTISEMENT

ರಾಜೀವ್‌ ಕುಮಾರ್‌ ವಿಚಾರಣೆಗೆ ಸಾಕ್ಷ್ಯ ಮಂಡಿಸಲು ‘ಸುಪ್ರೀಂ’ ಸೂಚನೆ

ಪಿಟಿಐ
Published 30 ಏಪ್ರಿಲ್ 2019, 20:09 IST
Last Updated 30 ಏಪ್ರಿಲ್ 2019, 20:09 IST
   

ನವದೆಹಲಿ:ಶಾರದಾ ಚಿಟ್‌ ಫಂಡ್‌ ಹಗರಣಕ್ಕೆ ಸಂಬಂಧಿಸಿದಂತೆ, ಕೋಲ್ಕತ್ತ ಪೊಲೀಸ್ ಕಮಿಷನರ್‌ ರಾಜೀವ್‌ ಕುಮಾರ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಾಕ್ಷ್ಯಗಳನ್ನು ಮಂಡಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್‌ ಮಂಗಳವಾರ ಸೂಚಿಸಿದೆ.

ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠ ಪ್ರಕರಣದ ವಿಚಾರಣೆ ನಡೆಸಿತು.

ರಾಜೀವ್‌ ಕುಮಾರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ನಾಶಗೊಳಿಸಿದ್ದಾರೆ ಎಂಬುದನ್ನು ಕೋರ್ಟ್‌ಗೆ ಮನವರಿಕೆ ಮಾಡುವಂತೆ‌‌ಸಿಬಿಐ ಪರವಾಗಿ ಹಾಜರಾಗಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರಿಗೆ ಪೀಠ ಆದೇಶಿಸಿತು.

ADVERTISEMENT

ಬುಧವಾರದೊಳಗೆ ರಾಜೀವ್‌ ಕುಮಾರ್‌ ವಿರುದ್ಧ ಸಾಕ್ಷಿ ಸಲ್ಲಿಸುವುದಾಗಿ ಮೆಹ್ತಾ ತಿಳಿಸಿದರು. ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.