ADVERTISEMENT

ಕಾಪ್ಟರ್‌ ದುರಂತದಲ್ಲಿ ಬದುಕುಳಿದ ವರುಣ್‌ ಸಿಂಗ್‌ ಬೆಂಗಳೂರಿಗೆ ಸ್ಥಳಾಂತರ ಸಾಧ್ಯತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಡಿಸೆಂಬರ್ 2021, 6:26 IST
Last Updated 9 ಡಿಸೆಂಬರ್ 2021, 6:26 IST
ವರುಣ್‌ ಸಿಂಗ್‌
ವರುಣ್‌ ಸಿಂಗ್‌   

ಚೆನ್ನೈ: ಕ್ಯಾಪ್ಟರ್‌ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿರುವ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ.

‘ವರುಣ್‌ ಸಿಂಗ್‌ ಅವರ ಪರಿಸ್ಥಿತಿ ಗಂಭೀರವಾಗಿದೆ. ಆದರೂ ಸ್ಥಿರವಾಗಿದೆ. ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಅಗತ್ಯವಿದ್ದರೆ ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಿಂದ, ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರ ಮಾಡಲಾಗುವುದು,’ ಎಂದು ಮೂಲಗಳ ಮಾಹಿತಿ ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ವರುಣ್‌ ಸಿಂಗ್‌ ಅವರ ಸ್ಥಿತಿಯ ಬಗ್ಗೆ ರಾಜ್ಯಸಭೆಗೆ ಗುರುವಾರ ಮಾಹಿತಿ ಒದಗಿಸಿದರು. ವೆಲ್ಲಿಂಗ್ಟನ್‌ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವರುಣ್‌ ಸಿಂಗ್‌ ಅವರು ಜೀವ ರಕ್ಷಕ ವ್ಯವಸ್ಥೆಯಲ್ಲಿದ್ದಾರೆ. ಅವರನ್ನು ಉಳಿಸಿಕೊಳ್ಳಲು ಸರ್ವ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ,’ ಎಂದು ಅವರು ತಿಳಿಸಿದರು.

ADVERTISEMENT

ದುರಂತದಲ್ಲಿ ಮಡಿದವರಿಗೆ ರಾಜ್ಯಸಭೆಯಲ್ಲಿ ಎರಡು ನಿಮಿಷಗಳ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ ಅಂತ್ಯಕ್ರಿಯೆಯನ್ನು ಸಕಲ ಮಿಲಿಟರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ರಕ್ಷಣಾ ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.