ADVERTISEMENT

ಸುವೇಂದು ಅಧಿಕಾರಿಯ ಅಂಗರಕ್ಷಕನ ಸಾವು: ತನಿಖೆ ಕೈಗೆತ್ತಿಕೊಂಡ ಪಶ್ಚಿಮ ಬಂಗಾಳ ಸಿಐಡಿ

ಪಿಟಿಐ
Published 12 ಜುಲೈ 2021, 6:56 IST
Last Updated 12 ಜುಲೈ 2021, 6:56 IST
ಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ
ಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ   

ಕೋಲ್ಕತ್ತ: ನಂದಿಗ್ರಾಮದ ಬಿಜೆಪಿ ಶಾಸಕ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಯವರ ಅಂಗರಕ್ಷನ ಸಾವಿನ ತನಿಖೆಯನ್ನು ಪಶ್ಚಿಮ ಬಂಗಾಳ ಅಪರಾಧ ತನಿಖಾ ಇಲಾಖೆ (ಸಿಐಡಿ) ಸೋಮವಾರ ಕೈಗೆತ್ತಿಕೊಂಡಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಸುವೇಂದು ಅಧಿಕಾರಿಯ ಅಂಗರಕ್ಷಕ ಸುಬ್ರತಾ ಚಕ್ರವರ್ತಿ ಅವರ ಸಾವಿನ ಬಗ್ಗೆ ನಾವು ತನಿಖೆ ನಡೆಸಲಿದ್ದೇವೆ. ಅವರ ಪತ್ನಿ ಪೊಲೀಸರಿಗೆ ದೂರು ನೀಡಿದ ಆಧಾರದ ಮೇಲೆ ತನಿಖೆ ಕೈಗೊಂಡಿರುವುದಾಗಿ ಸಿಐಡಿ ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಟಿಎಂಸಿ ಸಂಸದರಾಗಿದ್ದಾಗಿನಿಂದ ಸುವೇಂದು ಅಧಿಕಾರಿಯ ಭದ್ರತಾ ತಂಡದ ಭಾಗವಾಗಿದ್ದ 40 ವರ್ಷದ ಚಕ್ರವರ್ತಿ ಅವರು ರಾಜ್ಯ ಸಶಸ್ತ್ರ ಪೊಲೀಸ್ ಸಿಬ್ಬಂದಿಯಾಗಿದ್ದರು. 2015 ರಲ್ಲಿ ಸುವೇಂದು ರಾಜ್ಯ ಸಚಿವರಾದ ನಂತರವೂ ತಂಡದಲ್ಲಿ ಮುಂದುವರಿದಿದ್ದರು.

ADVERTISEMENT

ಚಕ್ರವರ್ತಿ ಅವರ ಪತ್ನಿ ಸುಪರ್ಣ ಚಕ್ರವರ್ತಿ ಅವರು ಇತ್ತೀಚೆಗಷ್ಟೇ ಪತಿಯ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಕಾಂತಿ ಪೊಲೀಸ್ ಠಾಣೆಗೆ ಹೊಸದಾಗಿ ದೂರು ನೀಡಿದ್ದರು. ಈ ಬಗ್ಗೆ ಪಶ್ಚಿಮ ಬಂಗಾಳದ ಪೊಲೀಸರು ತನಿಖೆ ನಡೆಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.