ಕೋಲ್ಕತ್ತ : ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಹೆಡ್ ಕಾನ್ಸ್ಟೆಬಲ್ ಒಬ್ಬರು ಇಲ್ಲಿನ ಭಾರತೀಯ ವಸ್ತು ಸಂಗ್ರಹಾಲಯದೊಳಗಿನ ಬ್ಯಾರಕ್ನಲ್ಲಿ ಮನಸೋಇಚ್ಛೆ ಗುಂಡಿನ ದಾಳಿ ನಡೆಸಿ ಸಹಾಯಕ ಸಬ್ ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿಯೊಬ್ಬರನ್ನು ಹತ್ಯೆ ಮಾಡಿದ್ದಾರೆ. ಸಹಾಯಕ ಕಮಾಂಡೆಂಟ್ ದರ್ಜೆಯ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.
‘ಹೆಡ್ ಕಾನ್ಸ್ಟೆಬಲ್ ಎ.ಕೆ.ಮಿಶ್ರಾ ಎಂಬುವರು ತಮ್ಮ ಬಳಿ ಇದ್ದ ಎಕೆ–47 ರೈಫಲ್ನಿಂದ ಗುಂಡಿನ ದಾಳಿ ನಡೆಸಿದ್ದಾರೆ. ಸಿಐಎಸ್ಎಫ್ ಇನ್ಸ್ಪೆಕ್ಟರ್ ಜನರಲ್ ಸುಧೀರ್ ಕುಮಾರ್ ಅವರು ಸ್ಥಳಕ್ಕೆ ಬಂದು ಮನವಿ ಮಾಡಿದ ಬಳಿಕ ಪೊಲೀಸರಿಗೆ ಶರಣಾಗಿದ್ದಾರೆ. ಶನಿವಾರ ಸಂಜೆ 6.45ರ ಸುಮಾರಿಗೆ ಘಟನೆ ನಡೆದಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.