ADVERTISEMENT

ಶ್ರೀನಗರ: ಸೇಲ್ಸ್‌ಮನ್ ಅನ್ನು ಗುಂಡಿಟ್ಟು ಕೊಂದ ಉಗ್ರರು

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2021, 16:59 IST
Last Updated 8 ನವೆಂಬರ್ 2021, 16:59 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ನಗರದಲ್ಲಿ ಸೋಮವಾರ ಸಂಜೆ ಸೇಲ್ಸ್‌ಮನ್ ಒಬ್ಬರನ್ನು ಉಗ್ರರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರ ನಗರದ ಬೊಹ್ರಿ ಪ್ರದೇಶದಲ್ಲಿ ಘಟನೆ ನಡೆದಿದೆ.

'ಮೊಹಮ್ಮದ್ ಖಾನ್ ಎಂಬುವವರ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಖಾನ್ ಬಂಡಿಪೋರಾದವರಾಗಿದ್ದು, ಸೇಲ್ಸ್‌ಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಗುಂಡಿನ ದಾಳಿ ನಡೆದ ಬಳಿಕ ಕೂಡಲೇ ಖಾನ್ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಗಂಭೀರ ಗಾಯಗಳಿಂದ ಬಳಲುತ್ತಿದ್ದ ಅವರು ಮೃತಪಟ್ಟರು' ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ಘಟನೆ ಬಳಿಕ ಆ ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಕಳೆದ ತಿಂಗಳು ಕಾಶ್ಮೀರದಾದ್ಯಂತ ಅಲ್ಪಸಂಖ್ಯಾತರು ಮತ್ತು ವಲಸಿಗರು ಸೇರಿದಂತೆ 11 ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.