ರಾಂಚಿ: ಜಾರ್ಖಂಡ್ನ ಪಲಾಮು ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವೆ ಘರ್ಷಣೆ ನಡೆದಿದೆ.
ಜಿಲ್ಲೆಯ ಮನಾಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಆರ್ಪಿಎಫ್ ಸಿಬ್ಬಂದಿಯನ್ನು ಕಂಡು ಮಾವೋವಾದಿಗಳು ಗುಂಡಿನ ದಾಳಿ ಆರಂಭಿಸಿದರು. ಅದಕ್ಕೆ ಪ್ರತಿಯಾಗಿ ಎನ್ಕೌಂಟರ್ ನಡೆಸಲಾಗಿದೆ. ಘಟನಾ ಸ್ಥಳದಲ್ಲಿ ಏರ್ ಗನ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ಸುಮಾರು 15 ರಿಂದ 20 ನಿಮಿಷಗಳ ಕಾಲ ಗುಂಡಿನ ಚಕಮಕಿ ನಡೆದಿದೆ. ಈ ಪ್ರದೇಶದಲ್ಲಿ ಮಾವೋವಾದಿ ಸಂಘಟನೆಯ ನಾಯಕ ಶಶಿಕಾಂತ್ ಕಾಣಿಸಿಕೊಂಡಿದ್ದಾರೆ. ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.