ವಕೀಲ ಪ್ರೇಮ್ ಪ್ರಕಾಶ್ ಮೆಹ್ರೋತ್ರಾ ಅವರ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಶಾಲಾ ಮಕ್ಕಳನ್ನು ಭೌತಿಕವಾಗಿ ಶಾಲೆಗೆ ಹಾಜರಾಗದಂತೆ ದೂರವಿಡುವುದರಿಂದ ಅವರ ಮೇಲೆ ಉಂಟಾಗುತ್ತಿರುವ ಮಾನಸಿಕ ಮತ್ತು ವಾಸ್ತವಿಕ ಅರಿವಿನ ಅಭಾವದ ದುಷ್ಪರಿಣಾಮಗಳ ವಿಷಯವನ್ನು ಪ್ರಸ್ತಾಪಿಸಲು ಪ್ರಯತ್ನಿಸುತ್ತಿರುವುದಾಗಿ ಹೇಳಲಾಗಿದೆ.
‘ಶಿಕ್ಷಣ ಸಂಸ್ಥೆಯ ಸಹಜ ಮತ್ತು ಶೈಕ್ಷಣಿಕ ವಾತಾವರಣದಲ್ಲಿ ನಡೆಯುತ್ತಿದ್ದ ನಿಯಮಿತ ಶಾಲೆ ಮತ್ತು ಬೋಧನೆಯ ಅಭಾವವು ವಿದ್ಯಾರ್ಥಿ ಸಮುದಾಯದ ಮನಸ್ಸಿನಲ್ಲಿ ಅಳಿಸಲಾಗದ ಬರೆ ಎಳೆದಿದೆ. ವರ್ಚುವಲ್ ತರಗತಿಗಳು ವಿದ್ಯಾರ್ಥಿಗಳ ಹಿತಾಸಕ್ತಿಗೆ ಹಾನಿಕಾರಕ ಮಾತ್ರವಲ್ಲ, ತಾರತಮ್ಯ ಮತ್ತು ಅನ್ಯಾಯದ ವರ್ತನೆಗೆ ಸಮಾನವಾಗಿದೆ ಎನ್ನುವುದು ಕೂಡ ಸಾಬೀತಾಗಿದೆ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.