ADVERTISEMENT

ರಾಜಸ್ಥಾನ: ಮನೆಗೆಲಸ ಮಾಡಲಿಲ್ಲವೆಂದು ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ

ಪಿಟಿಐ
Published 21 ಅಕ್ಟೋಬರ್ 2021, 2:52 IST
Last Updated 21 ಅಕ್ಟೋಬರ್ 2021, 2:52 IST
ಐಸ್ಟಾಕ್ ಚಿತ್ರ
ಐಸ್ಟಾಕ್ ಚಿತ್ರ   

ಜೈಪುರ: ರಾಜಸ್ಥಾನದ ಚುರು ಜಿಲ್ಲೆಯ ಖಾಸಗಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಘಟನೆಯ ಬಗ್ಗೆ ಶಿಕ್ಷಣ ಸಚಿವ ಗೋವಿಂದ ಸಿಂಗ್ ದೋಟಸ್ರಾ ದುಃಖ ವ್ಯಕ್ತಪಡಿಸಿದ್ದು, ಶಾಲೆಯ ಮಾನ್ಯತೆ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

13 ವರ್ಷದ ಮೃತ ವಿದ್ಯಾರ್ಥಿ ಗಣೇಶ್, ಖಾಸಗಿ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ತಮ್ಮ ಮನೆಗೆಲಸವನ್ನು ಪೂರ್ಣಗೊಳಿಸಿಲ್ಲವೆಂದು ಶಿಕ್ಷಕರು ಆತನ ಮೇಲೆ ತೀವ್ರವಾಗಿ ಥಳಿಸಿದ್ದಾರೆ ಎಂದು ಸಲಸಾರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂದೀಪ್ ವಿಷ್ಣೋಯ್ ಹೇಳಿದ್ದಾರೆ.

ADVERTISEMENT

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದರು ಎಂದು ವಿಷ್ಣೋಯ್ ಹೇಳಿದ್ದಾರೆ.

ಆರೋಪಿ ಶಿಕ್ಷಕ ಮನೋಜ್ (35) ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ ಎಂದು ಅವರು ಹೇಳಿದರು.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆ ಮುಗಿಯುವವರೆಗೂ ಶಾಲೆಯ ಮಾನ್ಯತೆಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ಎಂದು ಶಿಕ್ಷಣ ಸಚಿವ ದೋಟಸ್ರಾ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.