ADVERTISEMENT

ಛತ್ತೀಸಗಢ | ಕಚ್ಚಾ ಬಾಂಬ್ ಸ್ಫೋಟಿಸಿದ ನಕ್ಸಲರು: ಭದ್ರತಾ ಪಡೆಗಳು ಪಾರು

ಪಿಟಿಐ
Published 20 ಮಾರ್ಚ್ 2025, 7:35 IST
Last Updated 20 ಮಾರ್ಚ್ 2025, 7:35 IST
<div class="paragraphs"><p>ಛತ್ತೀಸಗಢ | ಕಚ್ಚಾ ಬಾಂಬ್ ಸ್ಫೋಟಿಸಿದ ನಕ್ಸಲರು: ಭದ್ರತಾ ಪಡೆಗಳು ಪಾರು</p></div>

ಛತ್ತೀಸಗಢ | ಕಚ್ಚಾ ಬಾಂಬ್ ಸ್ಫೋಟಿಸಿದ ನಕ್ಸಲರು: ಭದ್ರತಾ ಪಡೆಗಳು ಪಾರು

   

ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಗುರುವಾರ ನಕ್ಸಲರು ಸ್ಫೋಟಿಸಿದ ಕಚ್ಚಾ ಬಾಂಬ್‌ನಿಂದ ಭದ್ರತಾ ಪಡೆಗಳು ಸ್ವಲ್ಪದರಲ್ಲೇ ಪಾರಾಗಿವೆ ಎಂದು ಪೊಲೀಸರು ಅಧಿಕಾರಿಗಳು ತಿಳಿಸಿವೆ.

‌ಸ್ಫೋಟದಿಂದಾಗಿ ಭದ್ರತಾ ಸಿಬ್ಬಂದಿಗೆ ಯಾವುದೇ ಗಾಯ ಉಂಟಾಗಿಲ್ಲ. ಆದರೆ ಸ್ಫೋಟದಿಂದಾಗಿ ಎದ್ದಿದ್ದ ಭಾರಿ ದೂಳು ಹಾಗೂ ಮಣ್ಣಿನಿಂದಾಗಿ ಓರ್ವ ಅಧಿಕಾರಿ ಸೇರಿ ಇಬ್ಬರು ಸಿಬ್ಬಂದಿಯ ಕಣ್ಣಿಗೆ ಸಮಸ್ಯೆ ಉಂಟಾಗಿದೆ. ಅವರನ್ನು ಘಟನಾ ಸ್ಥಳದಿಂದ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಅಬುಜ್‌ಮಾದ್ ‍ಪ್ರದೇಶದಲ್ಲಿ ಮುಂಜಾನೆ 3 ಗಂಟೆಗೆ ಘಟನೆ ನಡೆದಿದ್ದು, ಈ ವೇಖೆ ಛತ್ತೀಸಗಢ ಪೊಲೀಸ್‌ನ ಜಿಲ್ಲಾ ಮೀಸಲು ಪಡೆ ಹಾಗೂ ವಿಶೇಷ ಕಾರ್ಯಪಡೆ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿದ್ದವು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ನಕ್ಸಲರ ‍ಪತ್ತೆಗೆ ಕೂಂಬಿಂಗ್ ನಡೆಯುತ್ತಿದೆ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.