ADVERTISEMENT

ಲಾಲು ಪ್ರಸಾದ್‌ ಇದ್ದ ಕೊಠಡಿಯಲ್ಲಿ ಅಗ್ನಿ ಅವಘಡ, ಅಪಾಯದಿಂದ ಪಾರು

ಪಿಟಿಐ
Published 7 ಜೂನ್ 2022, 9:29 IST
Last Updated 7 ಜೂನ್ 2022, 9:29 IST
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌   

ಮೇದಿನಿನಗರ್‌ (ಜಾರ್ಖಂಡ್‌): ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಅವರು ಉಳಿದುಕೊಂಡಿದ್ದ ಕೊಠಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸ್ವಲ್ಪದರಲ್ಲೇ ಅವರು ಅಪಾಯದಿಂದ ಪಾರಾಗಿದ್ದಾರೆ.

ಮಂಗಳವಾರ ಬೆಳಿಗ್ಗೆ ಸುಮಾರು 8 ಗಂಟೆ ವೇಳೆಗೆ ಲಾಲು ಪ್ರಸಾದ್‌ ಅವರು ಉಪಹಾರ ಸೇವಿಸುತ್ತಿದ್ದ ವೇಳೆ ಫ್ಯಾನ್‌ಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅವರ ಸಹಾಯಕರು ಬೆಂಕಿಯನ್ನು ನಂದಿಸಿದ್ದಾರೆ. ಯಾರಿಗೂ ಯಾವುದೇ ಅಪಾಯವಾಗಿಲ್ಲ.

13 ವರ್ಷಗಳ ಹಿಂದಿನ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ವಿಶೇಷ ನ್ಯಾಯಲಯದ ಮುಂದೆ ಹಾಜರಾಗಲು ಲಾಲು ಪ್ರಸಾದ್‌ ಅವರು ಸೋಮವಾರ ಮೇದಿನಿನಗರಕ್ಕೆ ಬಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.