ADVERTISEMENT

ಉದಯಪುರ: ಮೃತ ಟೈಲರ್‌ ಮಗನಿಗೆ ಸರ್ಕಾರಿ ನೌಕರಿಯ ಭರವಸೆ ನೀಡಿದ ಗೆಹಲೋತ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಜೂನ್ 2022, 10:34 IST
Last Updated 30 ಜೂನ್ 2022, 10:34 IST
ಅಶೋಕ್‌ ಗೆಹಲೋತ್‌
ಅಶೋಕ್‌ ಗೆಹಲೋತ್‌    

ಉದಯಪುರ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅವರು ನನಗೆ ಸರ್ಕಾರಿ ನೌಕರಿಯ ಭರವಸೆ ನೀಡಿದ್ದಾರೆ ಎಂದು ಮೃತ ಕನ್ಹಯ್ಯ ಲಾಲ್‌ ಅವರ ಮಗ ಯಶ್‌ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್‌ವೊಂದನ್ನು ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್‌ ಕನ್ಹಯ್ಯ ಲಾಲ್‌ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಮಂಗಳವಾರ ಕತ್ತು ಸೀಳಿ ಹತ್ಯೆ ಮಾಡಿದ್ದರು.

‘ಮುಖ್ಯಮಂತ್ರಿಯವರೊಂದಿಗೆ ನಾನು ಮಾತನಾಡಿದೆ. ಅವರು ನಮಗೆ ಹಣಕಾಸಿನ ನೆರವು ನೀಡಿದ್ದಾರೆ. ನನಗೆ ಸರ್ಕಾರಿ ನೌಕರಿಯ ಆಶ್ವಾಸನೆ ಕೊಟ್ಟಿದ್ದಾರೆ. ಅವರು ನಮಗೆ ಸಹಕಾರ ನೀಡುತ್ತಿದ್ದಾರೆ. ನಾವೂ ಸಹಕರಿಸುತ್ತಿದ್ದೇವೆ’ ಎಂದು ಯಶ್‌ ಹೇಳಿದ್ದಾರೆ.

ADVERTISEMENT

‘ನಾವು ಭದ್ರತೆ ಕೋರಿದ್ದೇವೆ. ನಮ್ಮ ತಂದೆಯೂ ಭದ್ರತೆ ಕೇಳಿದ್ದರು. ಆದರೆ ಕೊಟ್ಟಿರಲಿಲ್ಲ. ನಮಗೆ ಭದ್ರತೆಯ ಅಗತ್ಯವಿದೆ. ಆ ಬಗ್ಗೆ ಭರವಸೆಯೂ ಸಿಕ್ಕಿದೆ. ಅಪರಾಧಿಗಳಿಗೆ ಮರಣದಂಡನೆಯ ಶಿಕ್ಷೆಯನ್ನೇ ನೀಡಬೇಕು’ ಎಂದು ಯಶ್‌ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.