ADVERTISEMENT

ಲೋಕಸಭೆ ಚುನಾವಣೆ ಸೋಲಿನ ಹೊಣೆ ಸಚಿನ್‌ ಪೈಲಟ್ ಹೊರಲಿ: ಅಶೋಕ್‌ ಗೆಹ್ಲೋಟ್‌

ಮೌನ ಮುರಿದ ರಾಜಸ್ಥಾನ ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 4 ಜೂನ್ 2019, 10:56 IST
Last Updated 4 ಜೂನ್ 2019, 10:56 IST
   

ಜೈಪುರ: ಲೋಕಸಭೆ ಚುನಾವಣೆ ಫಲಿತಾಂಶದ ಎರಡು ವಾರಗಳ ನಂತರ ಮೌನ ಮುರಿದಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್, ‘ಜೋಧ್‌ಪುರದಲ್ಲಿ ಕಾಂಗ್ರೆಸ್ಸೋಲಿನ ಹೊಣೆಯನ್ನು ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ ಹೊರಬೇಕು’ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸೋತಿತ್ತು. ಜೋಧ್‌ಪುರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಅವರ ಪುತ್ರ ವೈಭವ್ ಗೆಹ್ಲೋಟ್‌ ಅವರೇ ಪರಾಭವಗೊಂಡಿದ್ದರು.

ADVERTISEMENT

‘ಜೋಧ್‌ಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ದೊಡ್ಡ ಅಂತರದಿಂದ ಗೆಲ್ಲಲಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಆರು ಮಂದಿ ಶಾಸಕರಿದ್ದಾರೆ ಎಂದು ಸಚಿನ್‌ ಪೈಲಟ್‌ ಹೇಳಿದ್ದರು. ಪಕ್ಷ ಸಾಕಷ್ಟು ಪ್ರಚಾರವನ್ನು ಮಾಡಿತ್ತು. ಹೀಗಾಗಿ, ಸಚಿನ್‌ ಸೋಲಿನ ಹೊಣೆ ಹೊರಬೇಕು’ ಎಂದು ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಗೆಹ್ಲೋಟ್‌ ಹೇಳಿದ್ದಾರೆ.

‘ಗೆದ್ದಿದ್ದರೆ ಸಚಿನ್‌ ಪೈಲಟ್‌ ಅದರ ಹಿರಿಮೆ ಪಡೆಯುತ್ತಿದ್ದರು. ಈಗ ಸೋಲಿನ ಹೊಣೆಯನ್ನು ಹೊರಲಿ’ ಎಂದು ಅವರು ಹೇಳಿದರು. ವೈಭವ್‌ ಈ ಕ್ಷೇತ್ರದಲ್ಲಿ 2.7 ಲಕ್ಷ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯ ವಿರುದ್ಧ ಸೋತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.